ಕಿರಿ ಕಿರಿಯ ಕಾಲರ್ ಟ್ಯೂನ್ ಗೆ ಕೊನೆಗೂ ಬಿತ್ತು ಬೀಗ. ಕೊರಾನಾ ಮಹಾಮಾರಿ ಕೋವಿಡ್-19 ಎರಡು ವರ್ಷಗಳ ಹಿಂದೆ ದೇಶವನ್ನು ಹಬ್ಬಿದಾಗ ಕೋವಿಡ್-19 ಕಾಲರ್ ಟ್ಯೂನ್ನ್ನು ಪ್ರಾರಂಭಿಸಲಾಯಿತು.ಇದರ ಮಧ್ಯೆ, ಕೊರೊನಾ ವೈರಸ್ ಜಾಗೃತಿ ಮತ್ತು ಮುನ್ನೆಚ್ಚರಿಕೆಗಳನ್ನು ಕುರಿತು ಕಾಲರ್ ಟ್ಯೂನ್ನ್ನು ನಿಲ್ಲಿಸಲು ಆರೋಗ್ಯ ಸಚಿವಾಲಯ ನಿರ್ಧರಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ತಿಳಿಸಿದೆ. ಮಹಾಮಾರಿ ಕೋವಿಡ್ ರೋಗದಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿತ್ತು. ಎಂದೂ ಕೇಳದ ಮತ್ತು ಸಾಕಷ್ಟು ಸಾವು ನೋವುಗಳು ಸಂಭವಿಸಿದೆ. ಕೋವಿಡ್-19 ಕಾಲರ್ ಟ್ಯೂನ್ನ್ನು ಎರಡು ವರ್ಷಗಳ ಹಿಂದೆ ಸಾಂಕ್ರಾಮಿಕ ರೋಗವು ದೇಶವನ್ನು ಆವರಿಸಿದಾಗ ಪ್ರಾರಂಭಿಸಲಾಯಿತು. ಭಾರತಿ ಏರ್ಟೆಲ್, ಬಿಎಸ್ಎನ್ಎಲ್, ರಿಲಯನ್ಸ್ ಜಿಯೋ ಮತ್ತು ವೊಡಾಫೋನ್-ಐಡಿಯಾ ಸೇರಿದಂತೆ ಆಪರೇಟರ್ಗಳು ತಮ್ಮ ಕಾಲರ್ ಟ್ಯೂನ್ಗಳನ್ನು ಮಾರ್ಚ್ 2020 ರಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ಬದಲಾಯಿಸಿದ್ದಾರೆ. ಮೊದಲು ಕೋವಿಡ್-19 ನಲ್ಲಿನ ಕಾಲರ್ ಟ್ಯೂನ್ ಜನರು ಕೆಮ್ಮುವುದು, ಸೀನುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ನಂತರ ಕೊರೊನಾವೈರಸ್ನಿಂದ ರಕ್ಷಿಸಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಸಲಹೆಯೊಂದಿಗೆ ಪ್ರಾರಂಭವಾಗುತ್ತಿತ್ತು. ಆದರೆ ಈ ವರ್ಷದ ಜನವರಿಯಲ್ಲಿ, ಜನರು ಲಸಿಕೆ ಹಾಕುವಂತೆ ಒತ್ತಾಯಿಸುವ ಸಂದೇಶವನ್ನಾಗಿ ಬದಲಾಯಿಸಲಾಯಿತು.ಸರ್ಕಾರದ ಈ ನಿರ್ಧಾರದಿಂದ ಯಾರಿಗೆ ಖುಷಿ ಯಾಗಿದೆಯೋ ಇಲ್ಲವೋ, ಆದರೆ, ನೆಟ್ಟಿಗರಿಗಂತ್ತು ತುಂಬಾ ಖುಷಿಯಾದಂತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವು ರೀತಿಯ ಫೋಸ್ಟ್ಗಳನ್ನು ಹಂಚಿಕೊಳ್ಳುತ್ತಿದ್ದು, ಕೊನೆಗೂ ಕಿವಿಗಳಿಗೆ ಮುಕ್ತಿ ನೀಡಲಾಯಿತು ಎನ್ನುವ ಫೋಸ್ಟ್ಗಳು ಹರಿದಾಡುತ್ತಿವೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada